ಪಟ್ಟಿಗೆ ಹಿಂತಿರುಗಿ

ಕಗ್ಗ 201 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಉರಿಯುತಿರೆ ಹೊಟ್ಟೆಕಿಚ್ಚಾರಿಸಲು ನೀರೆಲ್ಲಿ? । ನರಕವೆದೆಯಲಿ ನೆಲಸೆ ನಿದ್ದೆಗೆಡೆಯೆಲ್ಲಿ? ॥ ಹರಿಸಲಪ್ಪುದೆ ನರರು ಮತ್ಸರಿಯ ಸಂಕಟವ? । ಕರುಬಿದನ ಹರಿ ಪೊರೆಗೆ - ಮಂಕುತಿಮ್ಮ ॥ ೨೦೧ ॥

uriyutire hoTTe kichchu Arisalu nIrelli? । narakavu edeyali nelase niddege eDeyelli? ॥ harisalappude nararu matsariya sankaTava? । karubu idana hari porege - Mankutimma ॥ 201 ॥

ಕನ್ನಡದಲ್ಲಿ ಅರ್ಥ

ಹೊಟ್ಟೆಯುರಿಯನ್ನು ಆರಿಸಲು ನೀರು ಎಲ್ಲಿಹುದು? ನರಕದಂಥ ಹಿಂಸೆಯನ್ನು ನೀಡುವ ಈ ಅಸೂಯೆ ಎನ್ನವ ಉರಿ ಹೃದಯದಲಿ ನೆಲೆಸಿರುವಾಗ, ನಿದ್ದೆ ಬರಲು ಹೇಗೆ ಸಾಧ್ಯ. ಮತ್ಸರ ಪಡುವವನ ಸಂಕಟವನ್ನು ಯಾರಾದರೂ ನಿವಾರಿಸಲು ಸಾಧ್ಯವೇ? ಅಂತಹವನನ್ನು ಆ ದೇವರೇ ಕಾಪಾಡಬೇಕು ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"Is there water that can dowse this fire of jealousy? If hell resides in our mind, then where is the question of sleep (or peace)? Can man ever vanquish this discomfort of jealousy? Only God can help us to curb this feeling." - Mankutimma

ವಿಷಯಗಳು

DevotionNatureSocietyLovePeace

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.