ಪಟ್ಟಿಗೆ ಹಿಂತಿರುಗಿ

ಕಗ್ಗ 206 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಸತ್ತವೆನ್ನಾಶೆಗಳು, ಗೆದ್ದೆನಿಂದ್ರಿಯಗಣವ । ಚಿತ್ತವಿನ್ನಲುಗದೆಂಬಾ ಜಂಬ ಬೇಡ ॥ ಎತ್ತಣಿಂದಲೊ ಗಾಳಿ ಮೋಹಬೀಜವ ತಂದು । ಬಿತ್ತಲಾರದೆ ಮನದಿ - ಮಂಕುತಿಮ್ಮ ॥ ೨೦೬ ॥

sattevu enna AshegaLu, geddenu indriya gaNava । cittavu innu alugadu embA jamba bEDa ॥ ettaNindalo gALi mOha bIjava tandu । bittalArade manadi - Mankutimma ॥ 206 ॥

ಕನ್ನಡದಲ್ಲಿ ಅರ್ಥ

“ನನಗೆ ಆಸೆಗಳು ಸತ್ತಿವೆ. ನಾನು ಇಂದ್ರಿಯಗಳನ್ನು ಗೆದ್ದಿದ್ದೇನೆ. ನನ್ನ ಮನಸ್ಸು ಇನ್ನು ಚಂಚಲವಾಗದು ” ಎಂಬ ಜಂಬ ಪಡಬೇಡ. ಯಾವುದಾದರೂ ಒಂದು ಕಾರಣದಿಂದ, ನಿನ್ನ ಮನಸ್ಸಿನಲ್ಲಿ ಮತ್ತೆ ಆಸೆಯ ಬೀಜ ಬಂದು ಮೊಳಕೆಯೊಡೆಯಬಹುದಲ್ಲ ಎಂದು ಒಂದು ವಾಸ್ತವಿಕತೆಯನ್ನು ಬಣ್ಣಿಸುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"Do not be proud like this: 'All my desires are dead. I have conquered all my senses. My mind shall not waver any more.' Wind shall carry a seed of desire (attachment) from somewhere and plant it in your mind. Can't it? " - Mankutimma

ವಿಷಯಗಳು

Nature

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.