ಪಟ್ಟಿಗೆ ಹಿಂತಿರುಗಿ

ಕಗ್ಗ 363 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಆತುರತೆಯೇನಿರದು ವಿಧಿಯಯಂತ್ರಚಲನೆಯಲಿ । ಭೀತತೆಯುಮಿರದು, ವಿಸ್ಮೃತಿಯುಮಿರದೆಂದುಂ ॥ ಸಾಧಿಪುದದೆಲ್ಲವನು ನಿಲದೆ, ತಪ್ಪದೆ, ಬಿಡದೆ । ಕಾತರತೆ ನಿನಗೇಕೆ? - ಮಂಕುತಿಮ್ಮ ॥ ೩೬೩ ॥

Aturate Enu iradu vidhiya yantrachalaneyali । bhItateyum iradu, vismRutiyum iradu endum ॥ sAdhipudu ellavanu nilade, tappade, biDade । kAtarate ninagEke? - Mankutimma ॥ 363 ॥

ಕನ್ನಡದಲ್ಲಿ ಅರ್ಥ

ವಿಧಿಯ ಚಕ್ರದ ಚಲನೆಯಲಿ ಆತುರವಿರದು.ಭೀತತೆಯು ಇರದು ಮತ್ತು ವಿಧಿ ಯಾವುದನ್ನೂ ಮರೆಯದೆ ತಾನು ಸಾಧಿಸಬೇಕಾದದ್ದನ್ನೆಲ್ಲ ಬಿಡದೆ ,ತಪ್ಪದೆ ಸಾಧಿಸಿಯೇ ತೀರುತ್ತದೆ. ಹಾಗಾಗಿ ಏನಾಗುವುದೋ ಎಂತಾಗುವುದೋ ಎಂಬ ಕಾತರತೆ ನಿನಗೆ ಬೇಡ ಎಂದು ಒಂದು ಕಿವಿಮಾತನ್ನು ಆದೇಶದ ರೂಪದಲ್ಲಿ ಮಾನ್ಯ ಗುಂಡಪ್ಪನವರು ನಮಗೆ ಈ ಮುಕ್ತಕದಲ್ಲಿ ಹೇಳಿದ್ದಾರೆ.

ಅರ್ಥ ಮತ್ತು ವ್ಯಾಖ್ಯಾನ

"There is no anxiety (or urgency) in the running of the Providence machine. No fear. No lapse (or forgetting) ever. It will achieve and outlast everything without fail, without letting off. Why do you get restless?" - Mankutimma

ವಿಷಯಗಳು

DeathSufferingPeace

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.